ಟಿ. ಜಿ. ಶ್ರೀನಿಧಿ ಇಂದಿನ ಬಹುತೇಕ ಮೊಬೈಲ್ ಫೋನುಗಳಲ್ಲಿ 'ಫ್ಲೈಟ್ ಮೋಡ್' ಎನ್ನುವುದೊಂದು ಸೌಲಭ್ಯವಿರುತ್ತದೆ. ವಿಮಾನದಲ್ಲಿ ಪ್ರಯಾಣಿಸುವಾಗ ನಿಮ್ಮ ಮೊಬೈಲನ್ನು ಫ್ಲೈಟ್ ಮೋಡ್ಗೆ ಬದಲಾಯಿಸಿ ಎಂದು ಹೇಳುವುದನ್ನೂ ನೀವು ಕೇಳಿರಬಹುದು. ಮೊಬೈಲಿನಿಂದ ಹೊರಡುವ ಅಥವಾ ಅದನ್ನು ತಲುಪುವ ರೇಡಿಯೋ ತರಂಗಾಂತರದ (radio-frequency) ಸಂಕೇತಗಳನ್ನು ನಿರ್ಬಂಧಿಸುವುದು ಫ್ಲೈಟ್ ಮೋಡ್ನ ಉದ್ದೇಶ. ಇದನ್ನು ಬಳಸಿದಾಗ ನಮ್ಮ ಮೊಬೈಲಿನ ನೆಟ್ವರ್ಕ್ ಸಂಪರ್ಕ ಕಡಿದುಹೋಗುತ್ತದೆ, ಅಂತರಜಾಲ ಸಂಪರ್ಕ - ಬ್ಲೂಟೂತ್ ಇತ್ಯಾದಿಗಳು ನಿಷ್ಕ್ರಿಯವಾಗುತ್ತವೆ. ಫೋಟೋ ಕ್ಲಿಕ್ಕಿಸುವುದು, ಹಾಡು ಕೇಳುವುದು ಮುಂತಾದ - ಬಾಹ್ಯ ಸಂಪರ್ಕದ ಅಗತ್ಯವಿಲ್ಲದೆ ಮಾಡಬಹುದಾದ - ಕೆಲಸಗಳನ್ನು ಮಾತ್ರ ಯಾವುದೇ ನಿರ್ಬಂಧವಿಲ್ಲದೆ ಮಾಡಿಕೊಳ್ಳಬಹುದು. ಟೇಕ್-ಆಫ್ನಿಂದ ಪ್ರಾರಂಭಿಸಿ ಲ್ಯಾಂಡಿಂಗ್ವರೆಗೆ ವಿಮಾನ ಪ್ರಯಾಣದಲ್ಲಿ ಮೊಬೈಲ್ ಬಳಕೆ ನಿಷಿದ್ಧ. ಮೊಬೈಲ್ ಸಂಕೇತಗಳು ವಿಮಾನದ ನಿಯಂತ್ರಣ ಹಾಗೂ ಸಂವಹನ ವ್ಯವಸ್ಥೆಗಳೊಡನೆ ಹಸ್ತಕ್ಷೇಪ ಮಾಡದಿರಲಿ ಎನ್ನುವುದು ಈ ನಿಷೇಧದ ಉದ್ದೇಶ. ಇದಕ್ಕೆ ಕಾರಣವಾದ ಸಂಕೇತಗಳನ್ನಷ್ಟೆ ನಿರ್ಬಂಧಿಸಿ ಮೊಬೈಲಿನ ಬೇರೆ ಸೌಲಭ್ಯಗಳನ್ನು ಬಳಸಲು ಅನುವುಮಾಡಿಕೊಡುವುದರಿಂದಲೇ ಫ್ಲೈಟ್ ಮೋಡ್ ಹೆಸರಿನಲ್ಲಿ ವಿಮಾನಕ್ಕೂ ಜಾಗ ಸಿಕ್ಕಿದೆ. ಅಂದಹಾಗೆ ಬೇರೆಬೇರೆ ಮೊಬೈಲುಗಳಲ್ಲಿ ಇದನ್ನು ಏರ್ಪ್ಲೇನ್ ಅಥವಾ ಏರೋಪ್ಲೇನ್ ಮೋಡ್ ಎಂದೂ ಗುರುತಿಸಲಾಗುತ್ತದೆ. ಫ್ಲ...
ಟಿ. ಜಿ. ಶ್ರೀನಿಧಿ ಪೆನ್ಡ್ರೈವ್, ಮೆಮೊರಿ ಕಾರ್ಡ್ ಇತ್ಯಾದಿಗಳನ್ನೆಲ್ಲ ಮತ್ತೆ ಮತ್ತೆ ಬಳಸುತ್ತಿರುವುದು ಸುಲಭ, ನಿಜ. ಆದರೆ ಮಾಹಿತಿ ತುಂಬುವ - ಅಳಿಸುವ - ಮತ್ತೆ ತುಂಬುವ ಈ ಪ್ರಕ್ರಿಯೆ ಒಂದಷ್ಟು ಸಾರಿ ಪುನರಾವರ್ತನೆ ಆಗುತ್ತಿದ್ದಂತೆ ಆ ಸಾಧನದ ವಿಶ್ವಾಸಾರ್ಹತೆ ಕಡಿಮೆಯಾಗುತ್ತ ಬರುತ್ತದೆ. ಇದ್ದಕ್ಕಿದ್ದಂತೆ ಒಂದು ದಿನ ಅದರಲ್ಲಿರುವ ಮಾಹಿತಿಯನ್ನು ಓದುವುದೇ ಸಾಧ್ಯವಾಗುವುದಿಲ್ಲ! ಹೀಗಾಗಲು ಹಲವು ಕಾರಣಗಳಿರಬಹುದು. ಬಹಳಷ್ಟು ಸಾರಿ ಬಳಸಿ ಹಳೆಯದಾಗಿರುವುದರಿಂದ ಅದು ಹಾಳಾಗಿರಬಹುದು, ಅಥವಾ ಬ್ಯಾಡ್ ಸೆಕ್ಟರ್ ಸಮಸ್ಯೆ ಸೃಷ್ಟಿಯಾಗಿರಬಹುದು. ಅಷ್ಟೇ ಏಕೆ, ವೈರಸ್ ಬಂದಿರುವ ಅಥವಾ ಕಂಪ್ಯೂಟರಿನಲ್ಲೇ ಸಮಸ್ಯೆಯಿರುವ ಸಾಧ್ಯತೆಯೂ ಇರುತ್ತದೆ. ಇಂತಹ ಸನ್ನಿವೇಶದಲ್ಲಿ ಮೊದಲು ಅದನ್ನು ಬೇರೊಂದು ಕಂಪ್ಯೂಟರಿನಲ್ಲೋ ಮೊಬೈಲಿನಲ್ಲೋ ಬಳಸಲು ಪ್ರಯತ್ನಿಸಬಹುದು. ಆಂಟಿವೈರಸ್ ತಂತ್ರಾಂಶ ಬಳಸಿ ವೈರಸ್ ಕಾಟವೇನಾದರೂ ಇದೆಯೇ ಎಂದೂ ಪರೀಕ್ಷಿಸಬಹುದು. ಇಷ್ಟಾದರೂ ಸಮಸ್ಯಾತ್ಮಕ ಮೆಮೊರಿ ಕಾರ್ಡ್ ಅಥವಾ ಪೆನ್ಡ್ರೈವನ್ನು ತೆರೆಯುವುದು ಸಾಧ್ಯವಾಗುತ್ತಿಲ್ಲ ಎಂದರೆ ಫೈಲ್ ರಿಕವರಿ ತಂತ್ರಾಂಶಗಳ ಮೊರೆಹೋಗಬೇಕಾದ್ದು ಅನಿವಾರ್ಯವಾಗುತ್ತದೆ. ಸಾಮಾನ್ಯ ಮಾರ್ಗದಲ್ಲಿ ಓದಲು ಸಾಧ್ಯವಾಗದ ಮಾಹಿತಿಯನ್ನು ಹಲವು ಬಗೆಯ ಶೇಖರಣಾ ಮಾಧ್ಯಮಗಳಿಂದ ಮರಳಿ ಪಡೆಯಲು ನೆರವಾಗುವುದು ಈ ತಂತ್ರಾಂಶಗಳ ವೈಶಿಷ್ಟ್ಯ. ಅಳಿಸಿಹೋದ ಮಾಹಿತಿಯನ್ನು ಮರಳಿ ಪಡೆಯುವಲ್ಲೂ ಈ ತಂತ್ರಾಂಶಗಳು ನೆರವಾಗಬಲ್...
ಎರಡನೇ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ ಇದೇ ತಿಂಗಳಿನ ೨೩ ಹಾಗೂ ೨೪ರಂದು ಗುಲಬರ್ಗಾದಲ್ಲಿ ನಡೆಯಲಿದೆ. ಸೆಪ್ಟೆಂಬರ್ ೨೩ರ ಬೆಳಿಗ್ಗೆ ೧೧ ಗಂಟೆಗೆ ಮುಖ್ಯಮಂತ್ರಿಗಳು ಸಮ್ಮೇಳನ ಉದ್ಘಾಟಿಸಲಿದ್ದಾರೆ. 'ಮನುಕುಲದ ಒಳಿತಿಗಾಗಿ ವಿಜ್ಞಾನ-ತಂತ್ರಜ್ಞಾನ' ಈ ಸಮ್ಮೇಳನದ ಪ್ರಮುಖ ವಿಷಯ. ಎರಡು ದಿನಗಳ ಅವಧಿಯಲ್ಲಿ ಈ ವಿಷಯದ ವಿವಿಧ ಆಯಾಮಗಳಿಗೆ ಸಂಬಂಧಿಸಿದ ಅನೇಕ ವಿಚಾರಸಂಕಿರಣಗಳು ನಡೆಯಲಿವೆ. ಪ್ರೊ ಯು ಆರ್ ರಾವ್, ಪ್ರೊ ಪಿ ಬಲರಾಂ, ಪ್ರೊ ಎಂ ಐ ಸವದತ್ತಿ, ಪ್ರೊ ರೊದ್ದಂ ನರಸಿಂಹ, ಡಾ ವಿ ಪ್ರಕಾಶ್, ಡಾ ಪಿ ಎಸ್ ಶಂಕರ್, ಶ್ರೀ ನಾಗೇಶ ಹೆಗಡೆ - ಇವರು ಭಾಷಣಕಾರರಲ್ಲಿ ಪ್ರಮುಖರು. ಸಮ್ಮೇಳನದ ಸಂದರ್ಭದಲ್ಲಿ ವಸ್ತುಪ್ರದರ್ಶನ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ 'ವಿಜ್ಞಾನ ಲೋಕ' ಪತ್ರಿಕೆಯ ವಿಶೇಷ ಸಂಚಿಕೆಯನ್ನೂ ಹೊರತರಲಾಗುವುದು. ಸಮ್ಮೇಳನದಲ್ಲಿ ಭಾಗವಹಿಸಲು ಯಾವುದೇ ನೋಂದಣಿ ಶುಲ್ಕ ಇಲ್ಲ. ಹೆಚ್ಚಿನ ವಿವರಗಳಿಗೆ ಸಮ್ಮೇಳನದ ಸಂಘಟನಾ ಕಾರ್ಯದರ್ಶಿಯವರನ್ನು gugksta09@rediffmail.com ವಿಳಾಸದಲ್ಲಿ ಸಂಪರ್ಕಿಸಬಹುದು.
Comments
Post a Comment